Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:23 - ಕನ್ನಡ ಸತ್ಯವೇದವು C.L. Bible (BSI)

23 ನಾಮಾನನು, “ಆರು ಸಾವಿರ ನಾಣ್ಯವನ್ನಾದರೂ ತೆಗೆದುಕೊಳ್ಳಬಾರದೇ,” ಎಂದು ಅವನನ್ನು ಒತ್ತಾಯಪಡಿಸಿ, ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ, ಆ ಚೀಲಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ, ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾಮಾನನು - ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೇ ಎಂದು ಅವನನ್ನು ಒತ್ತಾಯಪಡಿಸಿ ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ ಆ ಚೀಲಗಳನ್ನೂ ಎರಡು ದುಸ್ತುಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾಮಾನನು, “ದಯಮಾಡಿ ಎಪ್ಪತ್ತು ಕಿಲೋಗ್ರಾಂ ತೆಗೆದುಕೊ!” ಎಂದು ಗೇಹಜಿಗೆ ಒತ್ತಾಯಪಡಿಸಿ ಎಪ್ಪತ್ತು ಕಿಲೋಗ್ರಾಂ ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಹಾಕಿದನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ತನ್ನ ಸೇವಕರಿಗೆ ಕೊಟ್ಟನು. ಆ ಸೇವಕರು ಈ ವಸ್ತುಗಳನ್ನು ತೆಗೆದುಕೊಂಡು ಗೇಹಜಿಯೊಡನೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:23
9 ತಿಳಿವುಗಳ ಹೋಲಿಕೆ  

ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,


ಅವರಲ್ಲೊಬ್ಬನು, “ದಯವಿಟ್ಟು ತಾವೂ ತಮ್ಮ ಸೇವಕರಾದ ನಮ್ಮ ಜೊತೆಯಲ್ಲಿ ಬರಬೇಕು,” ಎಂದು ಬೇಡಿಕೊಂಡನು. ಎಲೀಷನು, “ಬರುತ್ತೇನೆ,” ಎಂದು ಹೇಳಿ ಅವರೊಡನೆ ಹೊರಟನು.


ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವುದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತುಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.


ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.


ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು