Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:25 - ಕನ್ನಡ ಸತ್ಯವೇದವು C.L. Bible (BSI)

25 ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:25
14 ತಿಳಿವುಗಳ ಹೋಲಿಕೆ  

ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.


ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


“ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ ನೋಡಿ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲ. ಆದುದರಿಂದ ಸಮುವೇಲನ ಬಳಿಗೆ ಹೋದೆವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು