Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:26 - ಕನ್ನಡ ಸತ್ಯವೇದವು C.L. Bible (BSI)

26 ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಎಲೀಷನು ಅವನಿಗೆ - ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದು ನನ್ನ ಜ್ಞಾನ ದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷೇತೋಟಗಳು, ಕುರಿದನಗಳು, ದಾಸದಾಸೀ ಜನವು ಇವುಗಳನ್ನು ಸಂಪಾದಿಸುವದಕ್ಕೆ ಇದು ಸಮಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎಲೀಷನು ಗೇಹಜಿಗೆ, “ಅದು ನಿಜವಲ್ಲ! ನಾಮಾನನು ನಿನ್ನನ್ನು ಸಂಧಿಸಲು ತನ್ನ ರಥದಿಂದ ಹಿಂದಕ್ಕೆ ತಿರುಗಿದಾಗ ನನ್ನ ಹೃದಯವು ನಿನ್ನ ಹತ್ತಿರದಲ್ಲಿಯೇ ಇತ್ತು. ಹಣವನ್ನು, ಬಟ್ಟೆಗಳನ್ನು, ಆಲೀವನ್ನು, ದ್ರಾಕ್ಷಿಯನ್ನು, ಕುರಿಗಳನ್ನು, ಹಸುಗಳನ್ನು ಅಥವಾ ಸೇವಕಸೇವಕಿಯರನ್ನು ತೆಗೆದುಕೊಳ್ಳುವ ಕಾಲ ಇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:26
18 ತಿಳಿವುಗಳ ಹೋಲಿಕೆ  

ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ.


ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.


ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.


ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು