Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:3 - ಕನ್ನಡ ಸತ್ಯವೇದವು C.L. Bible (BSI)

3 ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆಯು ಒಂದು ದಿವಸ ತನ್ನ ಯಜಮಾನಿಗೆ - ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇರುತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅವನು ಇವನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:3
9 ತಿಳಿವುಗಳ ಹೋಲಿಕೆ  

ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.


ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.


ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.


ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು.


ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು