Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:5 - ಕನ್ನಡ ಸತ್ಯವೇದವು C.L. Bible (BSI)

5 ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:5
21 ತಿಳಿವುಗಳ ಹೋಲಿಕೆ  

ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.


“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.


ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.


ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.


ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.


ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.


ಅದೂ ಅಲ್ಲದೆ, ಪ್ರತಿಯೊಬ್ಬನಿಗೂ ಶ್ರೇಷ್ಠವಾದ ಹೊಸ ಬಟ್ಟೆಗಳನ್ನು ಕೊಟ್ಟನು. ಬೆನ್ಯಾಮೀನನಿಗಾದರೋ ಮುನ್ನೂರು ಬೆಳ್ಳಿನಾಣ್ಯಗಳನ್ನು ಹಾಗು ಐದು ಶ್ರೇಷ್ಠವಾದ ಹೊಸಬಟ್ಟೆಗಳನ್ನು ಕೊಟ್ಟನು.


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


“ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;


ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.


ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು.


ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು