Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:1 - ಕನ್ನಡ ಸತ್ಯವೇದವು C.L. Bible (BSI)

1 ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:1
15 ತಿಳಿವುಗಳ ಹೋಲಿಕೆ  

ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.


ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.


ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.


ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.


ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಆದುದರಿಂದ ನಾವು ಜೋರ್ಡನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ದಿಮ್ಮಿಯನ್ನು ಕಡಿದುಕೊಂಡು ಬಂದು ನಮಗೆ ಇರಲು ಒಂದು ಮನೆಯನ್ನು ಕಟ್ಟಿಕೊಳ್ಳೋಣ,” ಎಂದರು. ಅವನು ಅವರಿಗೆ, “ಹೋಗಬಹುದು,” ಎಂದು ಹೇಳಿದನು.


ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.


ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು