Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:15 - ಕನ್ನಡ ಸತ್ಯವೇದವು C.L. Bible (BSI)

15 ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:15
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.


ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.


ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು.


ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು