Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:28 - ಕನ್ನಡ ಸತ್ಯವೇದವು C.L. Bible (BSI)

28 “ನಿನಗಿರುವ ದುಃಖ ಯಾವುದು?” ಎಂದನು. ಆಗ ಆಕೆ, “ಈ ಸ್ತ್ರೀ ನನಗೆ, ‘ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ದಿನ ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದು ಹೇಳಿದ್ದರಿಂದ ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನಗಿರುವ ದುಃಖ ಯಾವದು ಎಂದು ಕೇಳಿದನು. ಆಗ ಆಕೆಯು - ಈ ಸ್ತ್ರೀಯು ನನಗೆ - ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ಹೊತ್ತು ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ ಎಂದು ಹೇಳಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:28
15 ತಿಳಿವುಗಳ ಹೋಲಿಕೆ  

ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಿದನು. ಆಕೆ, “ನಾನು ವಿಧವೆ; ಗಂಡನು ಸತ್ತುಹೋಗಿದ್ದಾನೆ.


ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.


ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪುಕೂಡಿಸಿಕೊಂಡು ಬಂದದ್ದೇಕೆ?” ಎಂದು ಕೇಳಿದರು.


ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ಕಡಲೇ, ಓಡುತ್ತಿರುವೆ ಏಕೆ? I ಜೋರ್ಡನ್, ಮರಳುತಿರುವೆ ಏಕೆ? II


ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು


ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು