Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:33 - ಕನ್ನಡ ಸತ್ಯವೇದವು C.L. Bible (BSI)

33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:33
32 ತಿಳಿವುಗಳ ಹೋಲಿಕೆ  

ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.


ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ.


“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?


ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.


ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.


ದೇವರಿಗೆ ವಿರುದ್ಧ ಕುದಿಯುತ್ತಿರುವೆ ಏಕೆ? ಬಾಯಿಂದ ಮಾತು ಹರಿಯುತ್ತಿವೆ ಏಕೆ?


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು