Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:5 - ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಒಬ್ಬನ ಕೊಡಲಿಯು ಕಾವು ತಪ್ಪಿ ನೀರೊಳಗೆ ಬಿದ್ದಿತು. ಆದದರಿಂದ ಅವನು - ಅಯ್ಯೋ, ಸ್ವಾಮೀ, ನಾನು ಅದನ್ನು ಎರವಾಗಿ ತಂದಿದ್ದೆನು ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಒಬ್ಬನು ಮರವೊಂದನ್ನು ಕಡಿದುರುಳಿಸಿದಾಗ, ಕಬ್ಬಿಣದ ಕೊಡಲಿಯು ಕಾವಿನಿಂದ ಕಳಚಿಕೊಂಡು ನೀರಿನೊಳಕ್ಕೆ ಬಿದ್ದುಬಿಟ್ಟಿತು. ಆ ಮನುಷ್ಯನು, “ಅಯ್ಯೋ, ಒಡೆಯನೇ! ನಾನು ಆ ಕೊಡಲಿಯನ್ನು ಎರವಲಾಗಿ ತಂದಿದ್ದೇನಲ್ಲಾ” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:5
12 ತಿಳಿವುಗಳ ಹೋಲಿಕೆ  

ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.


ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II


ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


“ಅಯ್ಯೋ ! ಅಯ್ಯೋ ! ಮಹಾನಗರಿ ನಿನಗೆಂಥಾ ದುರ್ಗತಿ ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.


ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.


ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.


ಕಾಡಿನ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನಿನ ಭವ್ಯ ಮರಗಳು ಬಿದ್ದುಹೋಗುವುವು.


ಅವರು ಜೋರ್ಡನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ ಒಬ್ಬನ ಕೊಡಲಿ, ಕಾವು ತಪ್ಪಿ, ನೀರೊಳಗೆ ಬಿದ್ದಿತು.


ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು