Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:8 - ಕನ್ನಡ ಸತ್ಯವೇದವು C.L. Bible (BSI)

8 ಸಿರಿಯಾದ ರಾಜನು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತುಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅರಾಮ್ಯರ ಅರಸನು ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತು ಮಾಡುವಷ್ಟು ಸಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರಾಮ್ಯರ ರಾಜನು ಇಸ್ರೇಲಿನ ವಿರುದ್ಧ ಯುದ್ಧಮಾಡಲು ಬಂದನು. ಅವನು ತನ್ನ ಸೇನಾಧಿಕಾರಿಗಳ ಸಭೆಸೇರಿಸಿ, “ನೀವು ಈ ಜಾಗದಲ್ಲಿ ಅಡಗಿಕೊಂಡಿದ್ದು, ಇಸ್ರೇಲರು ಇಲ್ಲಿಗೆ ಬಂದಾಗ ಅವರ ಮೇಲೆ ಆಕ್ರಮಣ ಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:8
13 ತಿಳಿವುಗಳ ಹೋಲಿಕೆ  

ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು.


ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.


ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.


ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.


ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು.


ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು.


ಮೂರು ವರ್ಷಗಳವರೆಗೆ ಇಸ್ರಯೇಲರಿಗೂ ಸಿರಿಯಾದವರಿಗೂ ಯುದ್ಧ ನಡೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು