Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:13 - ಕನ್ನಡ ಸತ್ಯವೇದವು C.L. Bible (BSI)

13 ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಯೇಲರ ಗತಿಯಾಗಲಿ ಅಥವಾ ಸತ್ತುಹೋದವರ ಗತಿಯಾಗಲಿ ಸಂಬವಿಸುವದಷ್ಟೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವರಲ್ಲೊಬ್ಬನು ಅರಸನಿಗೆ - ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲುಳಿದಿರುವ ಇಸ್ರಾಯೇಲ್ಯರ ಗತಿಯಾಗಲಿ ಸತ್ತುಹೋದವರ ಗತಿಯಾಗಲಿ ಸಂಭವಿಸುವದಷ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜನ ಅಧಿಕಾರಿಗಳಲ್ಲಿ ಒಬ್ಬನು, “ನಮ್ಮಲ್ಲಿ ಕೆಲವರು ನಗರದಲ್ಲಿ ಉಳಿದಿರುವ ಐದು ಕುದುರೆಗಳನ್ನು ತೆಗೆದುಕೊಳ್ಳೋಣ. ನಗರದಲ್ಲಿ ಉಳಿದಿರುವ ಇಸ್ರೇಲಿನ ಜನರಂತೆ ಹೇಗಾದರೂ ಈ ಕುದುರೆಗಳೂ ಬಹುಬೇಗ ಸತ್ತುಹೋಗುತ್ತವೆ. ಈ ಜನರನ್ನು ಕಳುಹಿಸಿ ಅಲ್ಲಿ ಏನು ನಡೆದಿದೆಯೆಂಬುದನ್ನು ನಾವು ತಿಳಿದುಕೊಳ್ಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:13
7 ತಿಳಿವುಗಳ ಹೋಲಿಕೆ  

ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.


ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಸಿರಿಯಾದವರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟುಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ,” ಎಂದನು.


ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಸಿರಿಯಾದವರ ಸೈನ್ಯವೆಲ್ಲಿರುತ್ತದೆಂಬುದನ್ನು ನೋಡಿಬರುವುದಕ್ಕಾಗಿ, ರಾಹುತರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು