Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:8 - ಕನ್ನಡ ಸತ್ಯವೇದವು C.L. Bible (BSI)

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು ಕುಡಿದು ಅದರಲ್ಲಿದ್ದ ಬೆಳ್ಳಿಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಕುಷ್ಠರೋಗಿಗಳು ಪಾಳೆಯವು ಆರಂಭವಾಗಿದ್ದಲ್ಲಿಗೆ ಬಂದು, ಒಂದು ಗುಡಾರದೊಳಕ್ಕೆ ಹೋದರು. ಅವರು ಅಲ್ಲಿ ತಿಂದರು ಮತ್ತು ಕುಡಿದರು. ನಂತರ ಈ ನಾಲ್ವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಪಾಳೆಯದಿಂದ ಹೊರಗೆ ತೆಗೆದುಕೊಂಡು ಹೋದರು. ಅವರು ಬೆಳ್ಳಿಬಂಗಾರಗಳನ್ನು ಮತ್ತು ಬಟ್ಟೆಗಳನ್ನು ಅಡಗಿಸಿಟ್ಟರು. ನಂತರ ಅವರು ಹಿಂದಿರುಗಿ ಬಂದು, ಮತ್ತೊಂದು ಗುಡಾರವನ್ನು ಪ್ರವೇಶಿಸಿದರು. ಆ ಗುಡಾರದಿಂದಲೂ ಅವರು ವಸ್ತುಗಳನ್ನು ಕೊಂಡೊಯ್ದರು. ಅವರು ಹೊರಗೆ ಹೋಗಿ ಅವುಗಳನ್ನು ಅಡಗಿಸಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:8
7 ತಿಳಿವುಗಳ ಹೋಲಿಕೆ  

“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ.


ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು.


ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು