Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ - ಹೇಗೂ ನಿನಗೆ ವಾಸಿಯಾಗುವದು ಎಂಬದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಎಲೀಷನು ಹಜಾಯೇಲನಿಗೆ, “‘ವಾಸಿಯಾಗುವುದು’ ಎಂದು ಬೆನ್ಹದದನಿಗೆ ಹೇಳು. ಆದರೆ, ‘ಅವನು ಸಾಯುವುದು ಖಂಡಿತ’ ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:10
16 ತಿಳಿವುಗಳ ಹೋಲಿಕೆ  

ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಅನಂತರ ಸರ್ವೇಶ್ವರ ನನಗೆ ನಾಲ್ಕುಮಂದಿ ಸುತ್ತಿಗೆ ಹಿಡಿದವರನ್ನು ತೋರಿಸಿದರು.


ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.


ಆ ಸ್ವಾಮಿಯಿಂದ ನನಗೆ ಮತ್ತೊಂದು ದರ್ಶನವಾಯಿತು. ಸ್ವಾಮಿ ನೂಲು ಮಟ್ಟದ ಗೋಡೆಯ ಮೇಲೆ ನಿಂತಿದ್ದರು. ಅವರ ಕೈಯಲ್ಲಿ ನೂಲುಗುಂಡೊಂದು ಇತ್ತು.


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಸರ್ವೇಶ್ವರ ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆ.


ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.


ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.


ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಈತನಿಗಿಂತ ಯೋಗ್ಯವಾದ ವ್ಯಕ್ತಿ ನಮಗೆ ಸಿಕ್ಕುವುದು ಸಾಧ್ಯವೆ?” ಎಂದು ಹೇಳಿ ಜೋಸೆಫನಿಗೆ, “ದೇವರೇ ನಿನಗೆ ಇದನ್ನೆಲ್ಲ ತಿಳಿಸಿರುವುದರಿಂದ ನಿನಗೆ ಸಮಾನವಾದ ಬುದ್ಧಿವಿವೇಕಗಳುಳ್ಳ ವ್ಯಕ್ತಿ ಯಾವನೂ ಇಲ್ಲ.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು