Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:28 - ಕನ್ನಡ ಸತ್ಯವೇದವು C.L. Bible (BSI)

28 ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಇವನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಹಜ್ಯನು ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧಮಾಡಲು ರಾಮೋತ್‌ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:28
18 ತಿಳಿವುಗಳ ಹೋಲಿಕೆ  

ಆ ಪ್ರೇರಣೆಯಿಂದಲೇ ಇಸ್ರಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಸಿರಿಯಾದ ಅರಸ ಹಜಾಯೇಲನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಸಿರಿಯಾದವರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಆಗ ಗಾಯಗೊಂಡು ಅದನ್ನು ಮಾಗಿಸಿಕೊಳ್ಳುವುದಕ್ಕಾಗಿ ಹಿಂದಿರುಗಿ ಜೆಸ್ರೀಲಿಗೆ ಬಂದಿದ್ದನು.) ಯೇಹುವು ತನ್ನ ಜೊತೆಗಾರನಿಗೆ, “ನೀವು ನನ್ನವರಾಗಿದ್ದರೆ, ಈ ಸುದ್ದಿ ಜೆಸ್ರೀಲನ್ನು ಮುಟ್ಟದಂತೆ, ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಬಿಡಬೇಡಿ,” ಎಂದು ಹೇಳಿದನು.


ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.


ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.


ಇಸ್ರಯೇಲರ ಅರಸನು ಹಾಗು ಯೆಹೂದ್ಯರ ಅರಸ ಯೆಹೋಷಾಫಾಟನು ರಾಮೋತ್ ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.


ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.


ಅನಂತರ ಅವನು ರಥದಲ್ಲಿ ಕುಳಿತು ಜೆಸ್ರೀಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು