Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:4 - ಕನ್ನಡ ಸತ್ಯವೇದವು C.L. Bible (BSI)

4 ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಗೆ - ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:4
24 ತಿಳಿವುಗಳ ಹೋಲಿಕೆ  

ಕೆಲವು ದಿನಗಳ ನಂತರ ಫೆಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರುಸಿಲ್ಲಳೊಂದಿಗೆ ಬಂದು ಪೌಲನನ್ನು ತನ್ನ ಬಳಿಗೆ ಕರೆಯಿಸಿದನು. ಕ್ರಿಸ್ತಯೇಸುವನ್ನು ವಿಶ್ವಾಸಿಸುವ ಬಗ್ಗೆ ಪೌಲನಾಡಿದ ಮಾತುಗಳನ್ನು ಆಲೈಸಿದನು.


ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ” ಎಂದನು.


ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು.


ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.


ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಊರುಬಾಗಿಲಿನ ಹತ್ತಿರ ನಾಲ್ಕುಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೇ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೇ?


ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.


ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು.


ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ಅನಂತರ ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆ ಬಂದು ಮುಂದೆ ನಿಂತಳು.


ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.


“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.


ಏಳು ವರ್ಷಗಳಾದನಂತರ ಆಕೆ ಅಲ್ಲಿಂದ ಸ್ವಂತ ನಾಡಿಗೆ ಬಂದು, ಪರರ ಕೈವಶವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು.


ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು