Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:6 - ಕನ್ನಡ ಸತ್ಯವೇದವು C.L. Bible (BSI)

6 ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನೇ ವಿಚಾರಿಸಿದನು. ಆಕೆ ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಹೋಗಿ ಈಕೆಯ ಹೊಲಮನೆಗಳನ್ನೂ ಈಕೆ ಈ ನಾಡನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು,” ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲೇ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಹೋಗಿ ಈಕೆಯ ಹೊಲಮನೆಗಳನ್ನೂ ಈಕೆಯು ದೇಶವನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನು ಆ ಸ್ತ್ರೀಯನ್ನು ಕೇಳಿದಾಗ, ಅವಳು ತನಗೆ ಸಂಭವಿಸಿದ್ದನ್ನು ಮತ್ತು ತನಗಿದ್ದ ಇಚ್ಛೆಯನ್ನು ತಿಳಿಸಿದಳು. ಆಗ ರಾಜನು ಅವಳಿಗೆ ಸಹಾಯಮಾಡಲು ಒಬ್ಬ ಅಧಿಕಾರಿಯನ್ನು ಕರೆದು, “ಅವಳಿಗೆ ಸೇರಬೇಕಾದ ಆಸ್ತಿಯೆಲ್ಲವನ್ನೂ ಆಕೆಗೆ ಕೊಡಿಸು. ಅವಳು ದೇಶವನ್ನು ಬಿಟ್ಟಂದಿನಿಂದ ಈವರೆಗಿನ ಆಕೆಯ ಭೂಮಿಯ ಉತ್ಪಾದನೆಯನ್ನೂ ಅವಳಿಗೆ ಕೊಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:6
10 ತಿಳಿವುಗಳ ಹೋಲಿಕೆ  

ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿಕೊಡಬೇಕು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.


ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.


ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು