Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:14 - ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಶಾಫಾಟನ ಮಗನೂ ಆದ ಯೆಹುವು ಯೋರಾಮನಿಗೆ ವಿರೋಧವಾಗಿ ಒಳಸಂಚುಮಾಡಿದನು. (ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರ ಸಹಿತವಾಗಿ ಹೋಗಿ ಹಜಾಯೇಲನೊಡನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:14
13 ತಿಳಿವುಗಳ ಹೋಲಿಕೆ  

ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.


ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.


ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.


ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?


ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು.


ಜಿಮ್ರಿ, ಅರಸನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಕೊಂದುಹಾಕಿದನೆಂಬ ಸುದ್ದಿ ಪಾಳೆಯದಲ್ಲಿದ್ದ ಇಸ್ರಯೇಲರಿಗೆ ಮುಟ್ಟಿತು. ಅವರು ಅದೇ ದಿವಸ, ಅಲ್ಲಿಯೇ, ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.


ಆ ಊರನ್ನು ಮುಟ್ಟಿದನಂತರ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸು. ಅವನು ಸಿಕ್ಕಿದಾಗ ಅವನನ್ನು ಅವನ ಜೊತೆಗಾರರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಒಳಗಿನ ಕೋಣೆಗೆ ಹೋಗು.


ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು