Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:32 - ಕನ್ನಡ ಸತ್ಯವೇದವು C.L. Bible (BSI)

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರಿದ್ದಾರೆ?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು, ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ - ಅಲ್ಲಿ ನನ್ನ ಪಕ್ಷದವರು ಯಾರು ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಹು ಕಿಟಕಿಯ ಕಡೆ ಮೇಲೆ ನೋಡಿದನು. ಅವನು, “ನನ್ನ ಪಕ್ಷದಲ್ಲಿರುವವರು ಯಾರು? ಯಾರಿದ್ದೀರಿ?” ಎಂದನು. ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಯೇಹುವಿನತ್ತ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:32
13 ತಿಳಿವುಗಳ ಹೋಲಿಕೆ  

ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.


ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.


ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ


ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು.


ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.


ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು.


ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು