Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:33 - ಕನ್ನಡ ಸತ್ಯವೇದವು C.L. Bible (BSI)

33 ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:33
13 ತಿಳಿವುಗಳ ಹೋಲಿಕೆ  

ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


“ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”


ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.


ಊರು ಬಾಗಿಲಿನಲ್ಲಿ ಜನರಿಂದ ತುಳಿತಕ್ಕೆ ಸಿಕ್ಕಿ ಅವನು ಸತ್ತದ್ದರಿಂದ ಈ ಮಾತು ನೆರವೇರಿತು.


ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.


ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.


ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.


ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು