Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:34 - ಕನ್ನಡ ಸತ್ಯವೇದವು C.L. Bible (BSI)

34 ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅನಂತರ ಅವನು ಅರಮನೆಯೊಳಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ - ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿಕೊಂಡು ಸಮಾಧಿಮಾಡಿರಿ; ಆಕೆಯು ರಾಜಪುತ್ರಿಯಾಗಿರುತ್ತಾಳಷ್ಟೆ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಹುವು ಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು. ನಂತರ ಅವನು, “ಈಗ ಶಾಪಗ್ರಸ್ತಳಾದ ಆ ಸ್ತ್ರೀಯನ್ನು ನೋಡಿ. ಅವಳು ರಾಜನ ಮಗಳಾದ್ದರಿಂದ ಸಮಾಧಿ ಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:34
10 ತಿಳಿವುಗಳ ಹೋಲಿಕೆ  

ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.


ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು