Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:36 - ಕನ್ನಡ ಸತ್ಯವೇದವು C.L. Bible (BSI)

36 ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ, “ಯೆಹೋವನು, ತನ್ನ ದಾಸನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ಈಗ ನೆರವೇರಿತು, ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅವರು ಹಿಂದಿರುಗಿ ಯೇಹುವಿನ ಹತ್ತಿರ ಬಂದು ಆ ಸಂಗತಿಯನ್ನು ತಿಳಿಸಲು ಅವನು ಅವರಿಗೆ - ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಇಜ್ರೇಲಿನ ಹೊಲದಲ್ಲಿ ತಿಂದು ಬಿಡುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜನರು ಹಿಂದಿರುಗಿ ಬಂದು ಯೇಹುವಿಗೆ ಅದನ್ನು ಹೇಳಿದರು. ಯೇಹುವು, “ಯೆಹೋವನು ತನ್ನ ಸೇವಕನೂ ತಿಷ್ಬೀಯನೂ ಆದ ಎಲೀಯನಿಗೆ ಈ ರೀತಿ ಸಂದೇಶ ನೀಡಲು ಹೇಳಿದ್ದನು. ಎಲೀಯನು ಹೇಳಿದ್ದೇನೆಂದರೆ: ಇಜ್ರೇಲ್ ಪ್ರದೇಶದಲ್ಲಿ ಈಜೆಬೆಲಳ ದೇಹವನ್ನು ನಾಯಿಗಳು ತಿನ್ನುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:36
9 ತಿಳಿವುಗಳ ಹೋಲಿಕೆ  

ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;


ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದನ್ನೆಲ್ಲಾ ಆರೋನ ಮತ್ತು ಅವನ ಮಕ್ಕಳು ಮಾಡಿದರು.


ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ನಗರಗಳು ಮತ್ತು ಅವುಗಳ ಗ್ರಾಮಗಳು.


ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ; ನಾಯಿಗಳು ಅದನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;’ ಎನ್ನುತ್ತಾರೆ,” ಎಂದು ಹೇಳಿ ಬಾಗಿಲು ತೆರೆದು ಓಡಿಹೋದನು.


ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.


ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು