Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:7 - ಕನ್ನಡ ಸತ್ಯವೇದವು C.L. Bible (BSI)

7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ಈ ರೀತಿ ಶಿಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:7
21 ತಿಳಿವುಗಳ ಹೋಲಿಕೆ  

ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,


ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು