Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:12 - ಕನ್ನಡ ಸತ್ಯವೇದವು C.L. Bible (BSI)

12 ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಎಕ್ ವಿಶಯಾತ್ ಅಮ್ಕಾ ಅಭಿಮಾನ್ ದಿಸ್ತಾ; ಸಗ್ಳ್ಯಾ ಮಾನ್ಸಾಂಚ್ಯಾ ಮದ್ದಿ ಅನಿ ವಿಶೆಸ್ ರಿತಿನ್ ತುಮ್ಚ್ಯಾ ಮದ್ದಿ ಬೊಲ್ತಾನಾ, ಅಮ್ಚಿ ಚಾಲ್ ಪ್ರಾಮಾನಿಕ್ ಅನಿ ದೆವಾಚ್ಯಾ ಭಿಂಯಾನ್ ಭರಲ್ಲಿ ಹಾಯ್ ಮನುನ್ ಅಮ್ಚೊ ಭುತ್ತುರ್ಲೊ ಮನ್ ಅಮ್ಕಾ ಸಾಕ್ಷಿ ದಿತಾ. ಜಗಾಚೆ ಶಾನ್‍ಪಾನ್ ನ್ಹಯ್, ದೆವಾಚಿ ಕುರ್ಪಾಚ್ ಅಮ್ಚ್ಯಾ ಹ್ಯಾ ಚಾಲಿಕ್ ಪ್ರೆರನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:12
40 ತಿಳಿವುಗಳ ಹೋಲಿಕೆ  

ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.


ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.


ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?


ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು