Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:28 - ಕನ್ನಡ ಸತ್ಯವೇದವು C.L. Bible (BSI)

28 ಇಂಥ ಇನ್ನಿತರ ಕಷ್ಟಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇನ್ನೂ ಬೇರೆ ಸಂಗತಿಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯು ದಿನದಿನ ನನ್ನನ್ನು ಪೀಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೀಗೆ ನಾನು ಇನ್ನೂ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇನೆ. ಎಲ್ಲಾ ಸಭೆಗಳ ಮೇಲೆ ನನಗಿರುವ ಚಿಂತೆಯೂ ಇವುಗಳಲ್ಲಿ ಒಂದು. ನಾನು ಪ್ರತಿನಿತ್ಯ ಅವುಗಳ ಬಗ್ಗೆ ಚಿಂತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹಿ ಅನಿ ದುಸ್ರಿ ಕಸ್ಟಾ ಸೊಡುನ್ ಮಾಕಾ ಸದ್ದಿಚೆ ಕಾಮ್ ಬಿ ಹಾಯ್. ಮಟ್ಲ್ಯಾರ್, ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚ್ಯೊ ಉಸ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:28
12 ತಿಳಿವುಗಳ ಹೋಲಿಕೆ  

ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು