Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:16 - ಕನ್ನಡ ಸತ್ಯವೇದವು C.L. Bible (BSI)

16 ನಾನೇನೂ ನಿಮಗೆ ಹೊರೆಯಾಗಿರಲಿಲ್ಲ ಎಂಬುದನ್ನು ನೀವು ಒಪ್ಪಿಕೊಂಡರೂ ಯುಕ್ತಿಯಿಂದ ನಿಮ್ಮನ್ನು ನಾನು ದುರುಪಯೋಗಪಡಿಸಿಕೊಂಡೆ ಎಂದು ನಿಮ್ಮಲ್ಲಿ ಯಾರಾದರೂ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಹೀಗಿರಲು, ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಒಂದು ವೇಳೆ ನೀವು - ಅದಿರಲಿ, ತಾನು ನಮಗೆ ಭಾರವಾಗದೆ ಹೋದರೂ ಯುಕ್ತಿಯುಳ್ಳವನಾಗಿದ್ದು ನಮ್ಮನ್ನು ಉಪಾಯದಿಂದ ಸುಲುಕೊಂಡನೆಂದು ಹೇಳೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏನೇ ಇದ್ದರೂ, ನಾನು ನಿಮಗೆ ಭಾರವಾಗಿರಲಿಲ್ಲ; ನಾನು ಯುಕ್ತಿಯುಳ್ಳವನಾಗಿ ನಿಮ್ಮನ್ನು ಉಪಾಯದಿಂದ ಸುಲಿದುಕೊಂಡೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ನಾ ತೆ ಖರೆ ಹಾಯ್, ಜಾಲ್ಯಾರ್ ಬಿ ಶಾನೆಪಾನಾನ್ ಮಿಯಾ ತುಮ್ಕಾ ಶಿರ್ಕುನ್ ಘಾಟ್ಲಾ ಮನುನ್ ಮನ್ಸಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:16
11 ತಿಳಿವುಗಳ ಹೋಲಿಕೆ  

ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.


ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


“ಪ್ರಭು ಎಂಥಾ ದಯಾಳು ಎಂಬುದನ್ನು ನೀವು ಅನುಭವದಿಂದ ಅರಿತುಕೊಂಡಿದ್ದೀರಿ.”


ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು