Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:4 - ಕನ್ನಡ ಸತ್ಯವೇದವು C.L. Bible (BSI)

4 ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಪ್ಲ್ಯಾ ಬಳನಸಲ್ಲ್ಯಾ ಪರಿಸ್ಥಿತಿಕ್ ಲಾಗುನ್ ತೊ ಕುರ್ಸಾರ್ ಮರ್ಲೊ ತೆ ಖರೆ ಹಾಯ್. ಹೊಲ್ಯಾರ್ ಬಿ ದೆವಾಚ್ಯಾ ತಾಕ್ತಿನ್ ತೊ ಅತ್ತಾ ಝಿತ್ತೊ ಹಾಯ್, ಅಮಿ ತೆಚ್ಯಾ ವಾಂಗ್ಡಾ ಬಳನಸಲ್ಲೆ, ಖರೆ ತುಮ್ಚಿ ಸೆವಾ ಕರುಕ್ ದೆವಾಚ್ಯಾ ತಾಕ್ತಿನ್ ಅಮಿ ತೆಚ್ಯಾ ವಾಂಗ್ಡಾ ಜಿವನ್ ಕರ್ತಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:4
26 ತಿಳಿವುಗಳ ಹೋಲಿಕೆ  

ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು.


ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.


ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.


‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.


ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು