Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:10 - ಕನ್ನಡ ಸತ್ಯವೇದವು C.L. Bible (BSI)

10 ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ. ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿವಿುತ್ತವೇ ಮನ್ನಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ಆ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ಯಾರನ್ನಾದರೂ ಕ್ಷಮಿಸಿದರೆ, ನಾನು ಅವರನ್ನು ಕ್ಷಮಿಸುವೆನು. ನಾನು ಯಾರನ್ನಾದರೂ ಕ್ಷಮಿಸಿದರೆ, ನಿಮ್ಮ ನಿಮಿತ್ತವಾಗಿಯೇ ಕ್ರಿಸ್ತ ಯೇಸುವಿನ ಸನ್ನಿಧಾನದಲ್ಲಿ ಕ್ಷಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನಾಕ್ ತುಮಿ ಮಾಪ್ ಕರ್ತ್ಯಾಶಿ ತೆಕಾ ಮಿಯಾಬಿ ಮಾಪ್ ಕರ್‍ತಾ. ಮಿಯಾ ಜೆ ಖಲೆ ಮಾಪ್ ಕರುಚೆ ಮನುನ್ ಹೊತ್ತೆ ಮಾಪ್ ಕರುನ್ ಹೊಲಾ ಹೊಲ್ಯಾರ್ ತೆ ತುಮ್ಚ್ಯಾಸಾಟ್ನಿ ಕ್ರಿಸ್ತಾಚ್ಯಾ ಇದ್ರಾಕ್ ಮಿಯಾ ಮಾಪ್ ಕರ್‍ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:10
7 ತಿಳಿವುಗಳ ಹೋಲಿಕೆ  

ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.


ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.


“ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು