Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:9 - ಕನ್ನಡ ಸತ್ಯವೇದವು C.L. Bible (BSI)

9 ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಎಂದು ನಿಮ್ಮ ಗುಣವನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಹೀಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸರ್ವವಿಷಯದಲ್ಲಿಯೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮ ಗುಣವನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬುವ ಉದ್ದೇಶದಿಂದಲೇ ಮೊದಲು ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಿಯಾ ದಿಲ್ಲ್ಯಾ ಸಗ್ಳ್ಯಾ ಸಂಗ್ತಿಯಾ ತುಮಿ ಖಾಲ್ತಿ ಹೊವ್ನ್ ಪಾಳ್ತ್ಯಾಶಿ ಕಾಯ್ ನಾ ಮನುನ್ ತುಮ್ಚಿ ಪರಿಕ್ಷಾ ಕರುಕ್ ಮನುನ್ ಮಿಯಾ ತುಮ್ಕಾ ತಿ ಚಿಟ್ ಲಿವಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:9
15 ತಿಳಿವುಗಳ ಹೋಲಿಕೆ  

ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.


ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.


ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.


ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.


ನಿಮ್ಮ ಪ್ರೀತಿ ಅವನಿಗೆ ಮನದಟ್ಟಾಗುವಂತೆ ನಡೆದುಕೊಳ್ಳಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು