Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:14 - ಕನ್ನಡ ಸತ್ಯವೇದವು C.L. Bible (BSI)

14 ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಂಚಿ ಮನಾ ಧಾಪಲ್ಲಿ ಹೊತ್ತಿ, ಅನಿ ಅಜುನ್ ಪತರ್ ಬಿ ಜುನ್ನೊ ಕರಾರ್ ವಾಚ್ತಾನಾ ತೆಂಚಿ ಮನಾ ಫಾಳಿನಿ ಧಾಪಲ್ಲಿ ರ್‍ಹಾತ್ಯಾತ್, ಖರೆ ಕ್ರಿಸ್ತಾಚ್ಯಾ ವೈನಾ ತಿ ಫಾಳಿ ಉಗ್ಡುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:14
34 ತಿಳಿವುಗಳ ಹೋಲಿಕೆ  

ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II


ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು