Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:6 - ಕನ್ನಡ ಸತ್ಯವೇದವು C.L. Bible (BSI)

6 ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ದೇವರೇ ನಮಗೆ ಕೊಟ್ಟನು. ಈ ಹೊಸ ಒಡಂಬಡಿಕೆಯು ಲಿಖಿತ ರೂಪವಾದ ಧರ್ಮಶಾಸ್ತ್ರವಲ್ಲ. ಇದು ಪವಿತ್ರಾತ್ಮನದು. ಲಿಖಿತ ರೂಪವಾದ ಧರ್ಮಶಾಸ್ತ್ರವು ಮರಣವನ್ನು ತರುತ್ತದೆ, ಆದರೆ ಪವಿತ್ರಾತ್ಮನು ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೆ ಅಮ್ಕಾ ನವ್ಯಾ ಕರಾರಾಚಿ ಕರುನ್ ಯೊಗ್ಯ್ ಕರ್‍ತಾ, ತೆ ಲಿವಲ್ಲೊ ಖಾಯ್ದೊ ನ್ಹಯ್, ಅತ್ಮ್ಯಾಚ್ಯಾ ವೈನಾ ದಾಕ್ವುನ್ ದಿತಾ, ಲಿವಲ್ಲೊ ಖಾಯ್ದೊ ಮರಾನ್ ಹಾನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:6
45 ತಿಳಿವುಗಳ ಹೋಲಿಕೆ  

ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.


ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.


ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು