Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:11 - ಕನ್ನಡ ಸತ್ಯವೇದವು C.L. Bible (BSI)

11 ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರಭುವಿನ ಭಯ ಎಂದರೇನೆಂಬುದು ನಮಗೆ ತಿಳಿದಿದೆ. ಆದ್ದರಿಂದ ಸತ್ಯವನ್ನು ಸ್ವೀಕರಿಸಿಕೊಳ್ಳುವಂತೆ ಜನರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲನು. ನೀವು ಸಹ ನಿಮ್ಮ ಹೃದಯಗಳಲ್ಲಿ ನಮ್ಮನ್ನು ತಿಳಿದುಕೊಂಡಿದ್ದೀರೆಂದು ನಂಬುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಧನಿಯಾಚೆ ಭಿಂಯೆ ಮಟ್ಲ್ಯಾರ್ ಕಾಯ್ ಮನುನ್ ವಳ್ಕುನ್ ಘೆವ್ನ್; ಹೆಚ್ಯಾ ವಿಶಯಾತ್ ದುಸ್ರ್ಯಾಕ್ನಿ ಸಮ್ಜುನ್ ಸಾಂಗುಕ್ ಖಟ್ಪಟ್ ಕರ್ತಾಂವ್, ದೆವಾಕ್ ಅಮ್ಚಿ ಪುರಾ ವಳಕ್ ಹಾಯ್ ಅನಿ ಅಮಿ ಕಸ್ಲೆ ಮನ್ತಲಿ ಸಮ್ಜನ್ ತುಮ್ಚ್ಯಾಬಿ ಭುತ್ತುರ್‍ಲ್ಯಾ ಮನಾತ್ನಿ ತುಮ್ಕಾ ಗಾವ್ಲಾ ಮನುನ್ ಅಮ್ಚೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:11
39 ತಿಳಿವುಗಳ ಹೋಲಿಕೆ  

ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.


“ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.


ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.


ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು