Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:6 - ಕನ್ನಡ ಸತ್ಯವೇದವು C.L. Bible (BSI)

6 ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ನಾವು ಯಾವಾಗಲೂ ಧೈರ್ಯವುಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಯಾವಾಗಲೂ ಧೈರ್ಯದಿಂದಿದ್ದೇವೆ. ಈ ದೇಹದಲ್ಲಿ ವಾಸವಾಗಿರುವ ತನಕ ಪ್ರಭುವಿನಿಂದ ದೂರವಾಗಿರುತ್ತೇವೆಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಶರೀರದಲ್ಲಿ ವಾಸಿಸುವವರೆಗೂ ನಾವು ಕರ್ತನಿಂದ ದೂರವಾಗಿದ್ದೇವೆಂದು ತಿಳಿದು, ನಾವು ಯಾವಾಗಲೂ ಭರವಸೆ ಉಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ಅಮಿ ಕನ್ನಾಬಿ ಧೈರ್ಯಾನ್ ಜಿವನ್ ಕರ್ತಾವ್. ಅಮಿ ಹ್ಯಾ ಆಂಗ್ ಮನ್ತಲ್ಯಾ ಘರಾತ್ ರ್‍ಹಾಯ್ ಪತರ್ ಅಮ್ಚ್ಯಾ ಧನಿಯಾಚ್ಯಾ ಘರಾಕ್ನಾ ಧುರ್ ಹಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:6
15 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ : “ನಿನ್ನ ಭರವಸೆಗೆ ಆಧಾರವಾದರೂ ಏನು?


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು