Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:18 - ಕನ್ನಡ ಸತ್ಯವೇದವು C.L. Bible (BSI)

18 ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಚೊ ಬಾಪ್ ಹೊತಾ ಅನಿ ತುಮಿ ಮಾಜಿ ಪೊರಾ ಹೊತ್ಯಾಶಿ, ಅಶೆ ಮನ್ತಾ ಸರ್ವೆಸ್ವರ್ ದೆವ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:18
21 ತಿಳಿವುಗಳ ಹೋಲಿಕೆ  

ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು