Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:2 - ಕನ್ನಡ ಸತ್ಯವೇದವು C.L. Bible (BSI)

2 :ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು ಎಂದು ದೇವರು ಹೇಳುತ್ತಾನಲ್ಲಾ. ಈಗಲೇ ಆ ಸುಪ್ರಸನ್ನತೆಯಕಾಲ; ಇದೇ ಆ ರಕ್ಷಣೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ತೆನಿಚ್ ಅಶೆ ಮಟಲ್ಲೆ ಹಾಯ್: ಆಯಿನ್ ಎಳಾರ್ ಮಿಯಾ ತೆಂಚಿ ಮಾಗ್ನಿ ಆಯಿಕ್ಲೊ, ಸುಟ್ಕೆಚ್ಯಾ ದಿಸಿ ಮಿಯಾ ತುಕಾ ಆದಾರ್ ದಿಲೊ, “ಹ್ಯೊಚ್ ತೊ ಆಯಿನ್ ಕಾಲ್,” ಹ್ಯೊಚ್ ತೊ ಸುಟ್ಕೆಚೊ ದಿಸ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:2
10 ತಿಳಿವುಗಳ ಹೋಲಿಕೆ  

ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ : “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.


ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.”


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II


“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು