Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:6 - ಕನ್ನಡ ಸತ್ಯವೇದವು C.L. Bible (BSI)

6 ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶುದ್ಧಮನಸ್ಸು ಜ್ಞಾನ ದೀರ್ಘಶಾಂತಿ ದಯೆ ಪವಿತ್ರಾತ್ಮ ಕಪಟವಿಲ್ಲದ ಪ್ರೀತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಶೆಚ್ ನಿತಳ್ ಮನಾನಿ, ಶಾನ್ಪಾನಾನ್, ಲೈ ಸಂಬಾಳುನ್ ಅನಿ ದಯಾಳ್ ಸ್ವಭಾವಾನ್ ಅಮಿ ಕ್ರಿಸ್ತಾಚಿ ಸೆವಕಾ ಮನುನ್ ಪವಿತ್ರ್ ಆತ್ಮ್ಯಾ ವೈನಾ ಅಮ್ಚೊ ಖರೊ ಪ್ರೆಮ್ ದಾಕ್ವುನ್ ದಿಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:6
41 ತಿಳಿವುಗಳ ಹೋಲಿಕೆ  

ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.


ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.


ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ.


ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.


ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು