Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:8 - ಕನ್ನಡ ಸತ್ಯವೇದವು C.L. Bible (BSI)

8 ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮರ್ಯಾದಿನ್ ನಾಹೊಲ್ಯಾರ್ ಅವ್ಮಾನ್ ಕರುನ್ ಘೆವ್ನ್; ನಾಹೊಲ್ಯಾರ್ ಹೊಗ್ಳುನ್ ಘೆವ್ನ್, ಅಮ್ಕಾ ಝುಟೆ ಮನುನ್ ಮನ್ತಾತ್, ಜಾಲ್ಯಾರ್ಬಿ ಅಮಿ ಖರೆ ಬೊಲ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:8
32 ತಿಳಿವುಗಳ ಹೋಲಿಕೆ  

“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.


ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.


ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.


ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.


ನಾನೇನೂ ನಿಮಗೆ ಹೊರೆಯಾಗಿರಲಿಲ್ಲ ಎಂಬುದನ್ನು ನೀವು ಒಪ್ಪಿಕೊಂಡರೂ ಯುಕ್ತಿಯಿಂದ ನಿಮ್ಮನ್ನು ನಾನು ದುರುಪಯೋಗಪಡಿಸಿಕೊಂಡೆ ಎಂದು ನಿಮ್ಮಲ್ಲಿ ಯಾರಾದರೂ ಹೇಳಬಹುದು.


ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು