Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 6:9 - ಕನ್ನಡ ಸತ್ಯವೇದವು C.L. Bible (BSI)

9 ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ವಳಕ್ ನಸಲ್ಲ್ಯಾಂಚ್ಯಾ ಸಾರ್ಕೆ ಅಮ್ಕಾ ಕರ್‍ತ್ಯಾತ್, ಜಾಲ್ಯಾರ್ಬಿ ಅಮಿ ಸಗ್ಳ್ಯಾಕ್ನಿ ವಳ್ಕಿಚೆ, ಅಮಿ ಮರ್ನಾಚ್ಯಾ ಪರಿಸ್ಥಿತಿತ್ ಪಾವಲ್ಲೆ ಸರ್ಕೆ ದಿಸ್ತಾವ್, ಜಾಲ್ಯಾರ್ ಬಿ ಅಮಿ ಝಿತ್ತೆಚ್ ಹಾಂವ್, ಅಮ್ಕಾ ಮಾರುನ್ ಬಡ್ವುಲ್ಯಾನಾತ್ ಜಾಲ್ಯಾರ್ಬಿ ಅಮ್ಚೊ ಜಿವ್ ಕಾಡುನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 6:9
18 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.


ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು