Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:7 - ಕನ್ನಡ ಸತ್ಯವೇದವು C.L. Bible (BSI)

7 ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಯೆನ್ಯಾಚ್ಯಾ ವೈನಾ ಎವ್ಡೆಚ್ ನ್ಹಯ್, ತುಮಿ ತೆಕಾ ದಿಲ್ಲ್ಯಾ ಉತ್ತೆಜನಾಚಿ ಖಬರ್ ಆಯ್ಕುನ್, ಮಾಜ್ಯಾ ಭುತ್ತುರ್ ಜಿವ್ ಭರ್‍ಲೊ ತುಮಿ ಮಾಕಾ ಕವ್ಡೆ ರಾಕುಲ್ಯಾಶಿ, ಅನಿ ಕವ್ಡೆ ಬೆಜಾರಾನ್ ಹಾಸಿ, ಅನಿ ಉಸ್ಕೊ ಕರುನ್ ಹಾಸಿ ಹೆ ಸಗ್ಳೆ ಮಾಕಾ ತೆನಿ ಸಾಂಗಲ್ಲ್ಯಾ ತನ್ನಾ, ಮಾಕಾ ಅನಿಉಲ್ಲೊ ಸಂತೊಸ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:7
34 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.


ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.


ಅಂದರೆ, ನನ್ನ ವಿಶ್ವಾಸದಿಂದ ನೀವೂ ನಿಮ್ಮ ವಿಶ್ವಾಸದಿಂದ ನಾನೂ - ಪರಸ್ಪರ ಪ್ರಯೋಜನವನ್ನು ಪಡೆಯಬೇಕೆಂಬುದೇ ನನ್ನ ಆಶಯ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು