Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:15 - ಕನ್ನಡ ಸತ್ಯವೇದವು C.L. Bible (BSI)

15 ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ವರ್ಣಿಸಲಶಕ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ವರ್ಣಿಸಲಸಾಧ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಸಾಂಗುಕ್ ಹೊಯ್ನಾ ತಸ್ಲ್ಯಾ ಹ್ಯಾ ದೆನ್ಗಿಯಾಂಚ್ಯಾಸಾಟ್ನಿ ಅಮಿ ದೆವಾಕ್ ಧನ್ಯವಾದ್ ದಿಂವ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:15
23 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II


ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.


ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು