Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:10 - ಕನ್ನಡ ಸತ್ಯವೇದವು C.L. Bible (BSI)

10 ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಅತ್ತಾ ಅಮ್ಕಾ ಸುಟ್ಕಾ ದಿನಾರೊ ಜೆಜು ಕ್ರಿಸ್ತ್ ಯೆಲ್ಲ್ಯಾಚ್ಯಾ ವೈನಾ ತೆಚಿ ಕುರ್ಪಾ ಮಾಳಾಕ್ ಯೆಲಾ. ತೆನಿ ಮರ್ನಾಚ್ಯಾ ಬಳಾಚೊ ನಾಸ್ ಕರ್‍ಲ್ಯಾನ್ ಅನಿ ಬರ್‍ಯಾ ಖಬ್ರೆ ವೈನಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ತೆನಿ ಅಮ್ಕಾ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:10
58 ತಿಳಿವುಗಳ ಹೋಲಿಕೆ  

ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.


ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!


ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ.


ದೇಹದ ಯಾವುದೊಂದು ಭಾಗದಲ್ಲೂ ಕತ್ತಲೆಯಿಲ್ಲದೆ ದೇಹವೆಲ್ಲ ಕಾಂತಿಮಯವಾಗಿದ್ದರೆ, ದೀಪವು ತನ್ನ ಪ್ರಕಾಶದಿಂದ ನಿನ್ನನ್ನು ಬೆಳಗಿಸುವಂತೆ, ನಿನ್ನ ದೇಹದಾದ್ಯಂತವೂ ದೇದೀಪ್ಯಮಾನವಾಗಿರುವುದು,” ಎಂದರು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು