Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:3 - ಕನ್ನಡ ಸತ್ಯವೇದವು C.L. Bible (BSI)

3-4 ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಅಮ್ಚ್ಯಾ ವಾಡ್ವಡ್ಲಾನಿ ಕರಲ್ಲ್ಯಾ ಸರ್ಕೆ ಪವಿತ್ರ್ ಮನಾನಿ ಸೆವಾ ಕರ್‍ತಲ್ಯಾ ದೆವಾಕ್ ಧನ್ಯವಾದ್ ದಿತಾ. ದಿಸ್-ರಾತ್ ಮಾಜ್ಯಾ ಮಾಗ್ನಿತ್ ಮಿಯಾ ತುಕಾ ತಿಮೊತಿ ಯಾದ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:3
21 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.


ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ನಾನು ಚಿಕ್ಕಂದಿನಿಂದ ಯಾವ ರೀತಿ ಜೆರುಸಲೇಮಿನಲ್ಲಿಯೇ ನನ್ನ ದೇಶೀಯರೊಡನೆ ಜೀವಿಸಿದೆಯೆಂಬುದು ಎಲ್ಲ ಯೆಹೂದ್ಯರಿಗೆ ತಿಳಿದ ವಿಷಯ.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು