Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಜೊ ಖರೊ ವಿಶ್ವಾಸ್ ಲೈ ಘಟ್ ಮನ್ತಲೆ ಮಾಕಾ ಗೊತ್ತ್ ಹಾಯ್ ತುಮ್ಚ್ಯಾ ಅಜ್ಜಿಚೊ ಲುಯಿಸಾಚೊ ಅನಿ ತುಮ್ಚ್ಯಾ ಬಾಯ್ಚೊ ಯುನಿಸಾಚೊ ವಿಶ್ವಾಸ್‍ಬಿ ತಸೊಚ್ ಘಟ್ ಹೊತ್ತೊ. ತಸ್ಲೊಚ್ ತುಕಾಬಿ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:5
25 ತಿಳಿವುಗಳ ಹೋಲಿಕೆ  

ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.


ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.


ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II


ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು