Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:8 - ಕನ್ನಡ ಸತ್ಯವೇದವು C.L. Bible (BSI)

8-9 ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ, ಇದೇ ನಾನು ಸಾರುವ ಸುವಾರ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ; ಇದೇ ನಾನು ಸಾರುವ ಸುವಾರ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮರಲ್ಲ್ಯಾನಿತ್ನಾ ಝಿತ್ತೊ ಹೊಲ್ಲೊ ಜೆಜು ಕ್ರಿಸ್ತ್ ದಾವಿದಾಚ್ಯಾ ಘರಾನ್ಯಾಚೊ ಮನುನ್ ಯಾದ್ ಕರ್, ಹಿಚ್ ಮಿಯಾ ಸಾಂಗುಕ್ ಲಾಗಲ್ಲಿ ಬರಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:8
18 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.


“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.


ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.


ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು