2 ತಿಮೊಥೆಯನಿಗೆ 3:12 - ಕನ್ನಡ ಸತ್ಯವೇದವು C.L. Bible (BSI)12 ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವದಕ್ಕೆ ಮನಸ್ಸುಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಜೆ ಕೊನ್ ದೆವಸ್ಪಾನಾಚೆ ಜಿವನ್ ಕರ್ತಾ ತೆಂಕಾ ಸಗ್ಳ್ಯಾಕ್ನಿ ತರಾಸ್ ರ್ಹಾತಾಚ್; ಅಧ್ಯಾಯವನ್ನು ನೋಡಿ |
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.