Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:15 - ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ಬಾರಿಕ್ ಹೊತ್ತ್ಯಾ ತನ್ನಾಚ್ಯಾನುಚ್ ತುಕಾ ಪವಿತ್ರ್ ಪುಸ್ತಕಾಚೆ ಜ್ಞಾನ್ ಶಿಕ್ವುನ್ ಹೊಲ್ಲೆ ಹಾಯ್, ತೆ ಜ್ಞಾನ್ ದಿತಾ ಅನಿ ತುಕಾ ಜೆಜು ಕ್ರಿಸ್ತಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗಾವ್ತಲ್ಯಾ ಸುಟ್ಕೆಚ್ಯಾ ವಾಟೆನ್ ಚಾಲ್ವುನ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:15
38 ತಿಳಿವುಗಳ ಹೋಲಿಕೆ  

ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರಗ್ರಂಥದಲ್ಲಿ ವಾಗ್ದಾನಮಾಡಿದ್ದರು.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.


ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ಆತನೇ ಬರೆದುದರಲ್ಲಿ ನಿಮಗೆ ನಂಬಿಕೆಯಿಲ್ಲವೆಂದ ಮೇಲೆ ನನ್ನ ಮಾತಿನಲ್ಲಿ ನಿಮಗೆ ಹೇಗೆ ನಂಬಿಕೆ ಹುಟ್ಟೀತು?”


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು.


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು