Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:2 - ಕನ್ನಡ ಸತ್ಯವೇದವು C.L. Bible (BSI)

2 ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾಚಿ ಬರಿ ಖಬರ್ ಸಾಂಗುನ್ಗೆತ್ ರ್‍ಹಾ, ಅನ್ಕುಲ್ ರ್‍ಹಾಲ್ಯಾರ್‍ಬಿ ನಸ್ಲ್ಯಾರ್‍ಬಿ ಸಗ್ಳ್ಯಾ ಎಳಾರ್ ತ್ಯಾತುರ್ ತಿಯಾ ಮಗ್ನ್ ಹೊವ್ನ್ ರ್‍ಹಾ, ಸಗ್ಳೆ ಸಂಬಾಳುನ್ ಘೆವ್ನ್ ತೆಂಕಾ ಜೊರ್ ಕರುನ್, ಚುಕ್ ಹೊತ್ತೆ ಸಮಾ ಕರುನ್, ಧೈರೊ ದಿವ್ನ್ ಉಲ್ಲಿ ಉಮ್ಮೆದ್ ಭರುನ್ ಸಗ್ಳೆ ಸಂಬಾಳುನ್ ಘೆವ್ನ್ ಶಿಕ್ವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:2
36 ತಿಳಿವುಗಳ ಹೋಲಿಕೆ  

ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.


ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು.


ಅವರು ಯೇಸುವಿನ ಬಳಿಗೆ ಬಂದು, “ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು;


ಪ್ರವಾದನೆಗಳನ್ನು ಅಲ್ಲಗಳೆಯದಿರಿ.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.


ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು