Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:3 - ಕನ್ನಡ ಸತ್ಯವೇದವು C.L. Bible (BSI)

3 ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಲೊಕಾ ಖರೆ ಶಿಕಾಪ್ ಆಯಿಕ್ತಲೆ ಸೊಡುನ್ ದಿತಲೊ ಎಳ್ ಯೆತಾ, ತೆನಿ ಅಪ್ನಾಚ್ಯಾ ಬುರ್ಶ್ಯಾ ಯವ್ಜನ್ಯಾಂಚ್ಯಾ ಸರ್ಕೆ ಅಪ್ನಾಕ್ ಆಯ್ಕುಕ್ ಬರೆ ದಿಸ್ತಲೆ ಶಿಕ್ವುತಲ್ಯಾ ಸುಮಾರ್ ಲೊಕಾಕ್ನಿ ತೆನಿ ಶಿಕ್ವುಕ್ ಮನುನ್ ಥವ್ನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:3
33 ತಿಳಿವುಗಳ ಹೋಲಿಕೆ  

ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ನಾನು ನುಡಿಯುವುದಾದರೋ ಸತ್ಯವನ್ನೇ. ಆದುದರಿಂದಲೇ ನಿಮಗೆ ನನ್ನಲ್ಲಿ ನಂಬಿಕೆ ಇಲ್ಲ.


“ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ.


ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.


ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಆಗ ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿಬಿಡುತ್ತೇನೆ.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು