Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:13 - ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವದಕ್ಕೆ ಬದ್ಧರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:13
42 ತಿಳಿವುಗಳ ಹೋಲಿಕೆ  

ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:


“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ.


ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.


ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು