Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:16 - ಕನ್ನಡ ಸತ್ಯವೇದವು C.L. Bible (BSI)

16 ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸಮಾದಾನಾಚೊ ಮುಳ್ ಹೊವ್ನ್ ಹೊತ್ತೊ ಧನಿ ಸಗ್ಳ್ಯಾ ಎಳಾರ್ ಅನಿ ಸಗ್ಳ್ಯಾ ವಾಟೆನಿ ತುಮ್ಕಾ ಸಮಾದಾನ್ ದಿಂವ್ದಿತ್. ಧನಿ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:16
40 ತಿಳಿವುಗಳ ಹೋಲಿಕೆ  

ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು